ಮಂಗಳೂರು: ಉಕ್ರೇನ್ನಲ್ಲಿ ಸಿಲುಕಿದ ಮಂಗಳೂರಿನ ವಿದ್ಯಾರ್ಥಿನಿಯರಾದ ಅನುಷಾ ಭಟ್ ಮತ್ತು ಸಾಕ್ಷಿ ಸುಧಾಕರ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದ್ದಾರೆ.
ಮಂಗಳೂರಿನ ಬಿಜೈನಲ್ಲಿರುವ ವಿದ್ಯಾರ್ಥಿನಿಯರ ಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಪೋಷಕರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಕೇಂದ್ರ ಸರ್ಕಾರದಿಂದ ವಿಶೇಷ ತಂಡ ರಚನೆ ಮಾಡಲಾಗಿದ್ದು, ನಾಲ್ಕು ಮಂತ್ರಿಗಳನ್ನು ಈ ಕಾರ್ಯಾಚರಣೆಗೆ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳ ಮನೆಯವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಆಗುತ್ತಿದೆ. ಉಕ್ರೇನ್ನಲ್ಲಿ ಸಿಲುಕಿದ ಮಂಗಳೂರಿನ 5 ವಿದ್ಯಾರ್ಥಿಗಳ ಕುಟುಂಬಗಳಿಗೆ ಭೇಟಿ ಮಾಡುತ್ತಿದ್ದೇನೆ. ಇದರಿಂದ ಮನೆಯವರು ಕೂಡ ಧೈರ್ಯದಲ್ಲಿ ಇದ್ದಾರೆ. ಪಾರ್ಟಿ ಕಡೆಯಿಂದ ಕೂಡ ವಾರ್ ರೂಮ್ ಓಪನ್ ಮಾಡಲಾಗಿದೆ ಎಂದರು.
ನವೀನ್ ಮೃತಪಟ್ಟ ವಿಚಾರ ಕೇಳಿ ನನಗೆ ಬಹಳ ದುಃಖವಾಗಿದೆ. ಅವರ ಕುಟುಂಬಕ್ಕೆ ಆ ಭಗವಂತ ದುಃಖ ಬರಿಸುವ ಶಕ್ತಿ ನೀಡಲಿ. ಆ ಕುಟುಂಬದ ಸದಸ್ಯರ ಜೊತೆ ಸರ್ಕಾರವಿದೆ. ಕೆಲ ವಿದ್ಯಾರ್ಥಿಗಳು ಪಾರ್ಸ್ ಪೋರ್ಟ್ ಕಳೆದು ಕೊಂಡಿದ್ದಾರೆ. ಇದಕ್ಕಾಗಿ ಒಂದು ಪ್ರತ್ಯೇಕ ತಂಡವನ್ನ ರಚನೆ ಮಾಡಲಾಗಿದೆ. ಪಾಸ್ ಪೋರ್ಟ್ ಇಲ್ಲದೆ ವಿದ್ಯಾರ್ಥಿಗಳನ್ನು ಕರೆ ತರುವಂತಹ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.