ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಗಣನೀಯವಾಗಿ ಇಳಿಕೆಯಾದ ಹಿನ್ನಲೆ ಕೋವಿಡ್ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ.
ಜನಜೀವನ ಹಾಗೂ ಆರ್ಥಿಕತೆಗೆ ಮತ್ತೆ ಚೇತರಿಕೆ ಒದಗಿಸುವ ಸಲುವಾಗಿ ಶಿಕ್ಷಣ, ಸಾಂಸ್ಕೃತಿಕ, ಸಭೆ – ಸಮಾರಂಭಗಳು, ಕ್ರೀಡೆ, ಜಾತ್ರೆ , ಉತ್ಸವಗಳು ಸೇರಿದಂತೆ ವಿವಿಧ ರಂಗಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಹಾಗೂ ಮದುವೆ, ಶವ ಸಂಸ್ಕಾರಗಳಿಗೆ ಭಾಗವಹಿಸುವ ಜನರ ಸಂಖ್ಯೆಗೆ ಮಿತಿ, ಚಿತ್ರಮಂದಿರ, ಶಾಲೆ-ಕಾಲೇಜು, ಗ್ರಂಥಾಲಯ, ತರಬೇತಿ ಕೇಂದ್ರಗಳು, ವಾಣಿಜ್ಯ ವಹಿವಾಟುಗಳ ನಿರ್ಬಂಧವನ್ನು ಸಹ ತೆರವುಗೊಳಿಸಲಾಗಿದೆ.
ಆದರೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, 15 ರಿಂದ 18 ವರ್ಷದವರೂ ಸೇರಿ ಅರ್ಹ ವಯೋಮಾನದವರೆಲ್ಲರೂ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯುವುದು, ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಸೇರಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಲಸಿಕೆ ಪಡೆಯಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.