ಕುಂದಾಪುರ: ಕಳೆದ ವಾರ ಕುಂದಾಪುರ ತಾಲೂಕಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಿನ್ನಲೆ ಬ್ಯಾನರ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್ಗೆ ವಿದ್ಯುತ್ ತಂತಿ ತಗುಲಿ ಸೌಕೂರು ನಿವಾಸಿ ಪ್ರಶಾಂತ್ ದೇವಾಡಿಗ ಮೃತಪಟ್ಟಿದ್ದನು. ಈ ಯುವಕನ ಕುಟುಂಬಕ್ಕೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ವೈಯಕ್ತಿಕವಾಗಿ 1ಲಕ್ಷ ರೂ. ಆರ್ಥಿಕ ಸಹಾಯ ನೀಡಿದರು.
ಗುರುವಾರ ಬೆಳಿಗ್ಗೆ ಮೃತ ಯುವಕನ ಮನೆಗೆ ತೆರಳಿದ ಬಿ.ಎಂ ಸುಕುಮಾರ ಶೆಟ್ಟಿ ಪೋಷಕರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಶಾಕ್ನಿಂದ ಮೃತಪಟ್ಟ ಯುವಕ ಬಡತನದ ಕುಟುಂಬದಿಂದ ಬಂದಿದ್ದು ಮನೆಯ ಜವಬ್ದಾರಿ ಹೊತ್ತಿದ್ದರು. ಆತನನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ. ವೈಯಕ್ತಿಕವಾಗಿ ಆತನ ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ್ದು ಕಾಲೇಜಿನಿಂದಲೂ ನೆರವು ನೀಡುವ ಬಗ್ಗೆ ಪ್ರಾಂಶುಪಾಲರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಅವರು ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡ ಶ್ರೀಧರ ದೇವಾಡಿಗ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಈ ಸಂದರ್ಭ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿಯವರು ವೈಯಕ್ತಿಕವಾಗಿ 15 ಸಾವಿರ ಹಣವನ್ನು ಮೃತರ ಕುಟುಂಬಕ್ಕೆ ನೀಡಿದರು.
ಈ ಸಂದರ್ಭ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶೇಖರ ಪೂಜಾರಿ ಗುಲ್ವಾಡಿ, ಸುಬ್ಬಣ್ಣ ಶೆಟ್ಟಿ ಕೆಂಚನೂರು, ಕುಪ್ಪ ಸೌಕೂರು, ಜಯರಾಮ ಶೆಟ್ಟಿ ಹಡಾಳಿ, ಆಶಾ ಸಂತೋಷ್ ಪೂಜಾರಿ, ರೀತಾ ದೇವಾಡಿಗ ಸೌಕೂರು, ರಂಜಿತ್ ಪೂಜಾರಿ ಕರ್ಕಿ, ಬಿಜೆಪಿ ಗುಲ್ವಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಂದ್ರ ಶೆಟ್ಟಿ ಗುಲ್ವಾಡಿ, ದೇವಾಡಿಗರ ಸಮಾಜ ಸೇವಾ ಸಂಘ ಕುಂದಾಪುರದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಕಾರ್ಯದರ್ಶಿ ಉದಯ ದೇವಾಡಿಗ, ಸ್ಥಳೀಯರಾದ ಗೋಪಾಲ ದೇವಾಡಿಗ, ಪ್ರಮುಖರಾದ ಸಂಜೀವ ದೇವಾಡಿಗ ತಲ್ಲೂರು, ರಾಜೀವ ಶೆಟ್ಟಿ ಹಟ್ಟಿಯಂಗಡಿ, ನಾರಾಯಣ ನಾಯ್ಕ ನೇರಳಕಟ್ಟೆ ಉಪಸ್ಥಿತರಿದ್ದರು.