Sunday, June 8, 2025

ಆಳ್ವಾಸ್‌: ಮಾ.6ರವರೆಗೆ ನಡೆಯಲಿರುವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಶಾಸಕ ಉಮಾನಾಥ್‌ ಚಾಲನೆ

ಮೂಡುಬಿದರೆ: ಆಳ್ವಾಸ್‌ ಕಾಲೇಜ್‌ನ ವಿದ್ಯಾಗಿರಿ ಕ್ಯಾಂಪಸ್‌ನ ಮೈದಾನದಲ್ಲಿ ಮಾ.6ರವರೆಗೆ ನಡೆಯಲಿರುವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್‌ ಕೋಟ್ಯಾನ್‌ ಚಾಲನೆ ನೀಡಿದರು.
ಪಂದ್ಯಾವಳಿಗೆ ಚಾಲನೆ ನೀಡಿದ ಮಾತನಾಡಿದ ಅವರು “ಪ್ರತಿಯೊಂದು ಆಟದಲ್ಲಿ ಕ್ರೀಡಾಸ್ಫೂರ್ತಿಯಿಂದ ಕೊನೆಯವರೆಗೂ ತೊಡಗಿಸಿಕೊಂಡಾಗ ಗೆಲುವು ಖಚಿತ. ಕ್ರೀಡಾರ್ಥಿಗಳು ತಮ್ಮ ಆಟಗಳಲ್ಲಿ ಸಕ್ರಿಯ ತೊಡಗಿಸಿಕೊಂಡು ಸಾಧಿಸಬೇಕು. ಆಳ್ವಾಸ್ ಸಂಸ್ಥೆಯು ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ದೇಶ ವಿದೇಶಗಳ ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುತ್ತಾ ಬಂದಿದೆ ಎಂದರು.
ಮಂಗಳೂರು ವಿವಿ ರಿಜಿಸ್ಟ್ರಾರ್ ಡಾ. ಕಿಶೋರ್ ಕುಮಾರ್ ಸಿ ಕೆ ಮಾತನಾಡಿ, ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ 17ನೇ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ಮಂಗಳೂರು ವಿವಿ ತಂಡದಲ್ಲಿರುವ 9ಕ್ಕೂ ಅಧಿಕ ಆಟಗಾರರು ಆಳ್ವಾಸ್ ವಿದ್ಯಾರ್ಥಿಗಳೇ ಆಗಿರುವುದು ಇಲ್ಲಿನ ಕ್ರೀಡಾ ಸಾಧನೆಗೆ ಹಿಡಿದ ಕೈಗನ್ನಡಿ ಎಂದರು.
ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟದ 31 ಪುರುಷರ ತಂಡ ಹಾಗೂ 27 ಮಹಿಳೆಯರ ತಂಡಗಳ 700 ಕ್ರೀಡಾಪಟುಗಳು ಹಾಗೂ 500 ಕ್ರೀಡಾಧಿಕಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದರು. ಈ ಬಾರಿಯ ಪಂದ್ಯಾವಳಿಯಲ್ಲಿ ಅತ್ಯಾಧುನಿಕ ಫ್ಲಡ್ ಲೈಟ್ ವ್ಯವಸ್ಥೆಯಲ್ಲಿ ಮೊದಲ ಬಾರಿಗೆ ಇಂಡೋರ್ ಆರ್ಟಿಫಿಶಿಯಲ್ ಗ್ರಾಸ್ ಕೋರ್ಟ್‌ನಲ್ಲಿ ಮ್ಯಾಚ್‌ಗಳು ನಡೆಯಲಿದೆ.
ಈ ಸಂದರ್ಭ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಸಂಸ್ಥೆಯ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಡಿವೈಇಎಸ್ ಡೆಪ್ಯುಟಿ ಡೈರೆಕ್ಟರ್ ಪ್ರದೀಪ್ ಡಿಸೋಜ, ಬ್ಯಾಡ್ಮಿಂಟನ್ ಫೆಡೆರೇಷನ್ ಆಫ್ ಇಂಡಿಯಾದ ಜನರಲ್ ಸೆಕ್ರೆಟರಿ ದಿನೇಶ್ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles