Sunday, June 8, 2025

ರಾಜ್ಯ ಬಜೆಟ್ ಸರ್ವಸ್ಪರ್ಶಿ ಮತ್ತು ಜನಪರ ಬಜೆಟ್‌ : ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿರುವ 2022-23ನೇ ಸಾಲಿನ ರಾಜ್ಯ ಬಜೆಟ್ ಸರ್ವಸ್ಪರ್ಶಿ ಮತ್ತು ಜನಪರ ಬಜೆಟ್‌ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ವರಿಗೆ ಸೂರು ಯೋಜನೆಯಡಿ 5 ಲಕ್ಷ ಹೊಸ ಮನೆಗಳ ನಿರ್ಮಾಣ, ವೈದ್ಯಕೀಯ ಸೌಲಭ್ಯಗಳಿಗಾಗಿ ಯಶಸ್ವಿನಿ ವಿಮಾ ಯೋಜನೆ ಮತ್ತೆ ಜಾರಿಗೆ ತರಲಾಗಿದೆ. ವಿಧವಾ ವೇತನ, ಆಶಾ ಕಾರ್ಯಕರ್ತೆಯರ ಮತ್ತು ಬಿಸಿಯೂಟ ಸಹಾಯಕರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಕಾಶಿ ಯಾತ್ರೆಗೆ ತೆರಳುವ ಭಕ್ತರಿಗೆ 5 ಸಾವಿರ ಸಹಾಯ ಧನ, ಮುಜರಾಯಿ ದೇವಸ್ಥಾನಗಳಿಗೆ ಸ್ವಾಯತ್ತತೆ, ನದಿಗಳಿಗೆ ಉಪ್ಪು ನೀರು ತಡೆಗಟ್ಟಲು ಖಾರ್‌ಲ್ಯಾಂಡ್ ಯೋಜನೆ ಅನುಷ್ಠಾನ, ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಸಂಯೋಜನೆ ಮೂಲಕ 100 ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ಮತ್ಸ್ಯ ಸಿರಿ ಯೋಜನೆ ಜಾರಿ. ನವ ಭಾರತಕ್ಕಾಗಿ ನವ ಕರ್ನಾಟಕ ಈ ಬಾರಿಯ ಬಜೆಟ್ ಆಗಿದ್ದು ಎಲ್ಲಾ ವರ್ಗ, ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ ಎಂದು ನಯನಾ ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles