ಬಂಟ್ವಾಳ: ಮಿನಿ ಬಸ್ ಡಿಕ್ಕಿಯಾಗಿ ಬೈಕ್ ಸವಾರಸಾವನ್ನಪ್ಪಿದ ಘಟನೆ ಬಂಟ್ವಾಳ-ಮೂಡುಬಿದಿರೆ ರಸ್ತೆ ನಡುವಿನ ಮಾಡಮ್ಮೆ ತಿರುವಿನಲ್ಲಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಮೂಡುಬಿದಿರೆ ಮೂಡುಮಾರ್ನಾಡು ಕುಕ್ಕುದಪಲ್ಕೆ ನಿವಾಸಿ, ವಿಘ್ನೇಶ್ವರ ಯುವಕ ಮಂಡಲದ ಅಧ್ಯಕ್ಷ ಗಣೇಶ್ (28) ಎಂದು ಗುರುತಿಸಲಾಗಿದೆ. ಇವರು ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ.