ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳಿಂದ ಬಹಳ ಸಂತೋಷವಾಗಿದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಗೋವು ರಕ್ಷಣೆಯ ಹಿತದೃಷ್ಟಿಯಿಂದ ಗೋಶಾಲೆಗಳನ್ನು ಹೆಚ್ಚಿಸುವುದರ ಜೊತೆಗೆ ಪ್ರಸ್ತುತ ಇರುವ ಗೋಶಾಲೆಗಳಿಗೆ ಹೆಚ್ಚಿನ ಅನುದಾನ ಘೋಷಿಸಿರುವುದು ಶ್ಲಾಘನೀಯ. ಪಶುವೈದ್ಯರ ನೇಮಕಾತಿ, ದೇವಸ್ಥಾನಗಳನ್ನು ಸ್ವಾಯತ್ತತೆಗೊಳಿಸುವುದು, ಅರ್ಚಕರ ವೇತನ ಹೆಚ್ಚಳಕ್ಕೆ ಕ್ರಮಕೈಗೊಂಡಿರುವುದು ಬಹಳ ಸಂತಸದ ವಿಚಾರ ಎಂದು ಶ್ರೀಗಳು ತಿಳಿಸಿದ್ದಾರೆ.