ಮಾಸ್ಕೊ: ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಡೆಯುತ್ತಿರುವ ಯುದ್ಧಕ್ಕೆ ರಷ್ಯಾವು ಶನಿವಾರ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ.
ಮಾನವೀಯ ದೃಷ್ಟಿಯಿಂದ ಮರಿಯುಪೋಲ್ ಮತ್ತು ವೋಲ್ನೋವಾಖಾ ನಗರದ ನಾಗರಿಕರು ಸ್ಥಳಾಂತರವಾಗಲು ರಷ್ಯಾದ ರಕ್ಷಣಾ ಸಚಿವಾಲಯ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಉಕ್ರೇನ್ ವಿರುದ್ಧ ಯುದ್ಧ ಸಾರಿದ 10 ದಿನಗಳ ನಂತರ ಮೊದಲ ಬಾರಿಗೆ ರಷ್ಯಾ 2 ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಣೆ ಮಾಡಿದೆ.
ಈ ಎರಡು ನಗರಗಳ ನಾಗರಿಕರ ನಿರ್ಗಮನಕ್ಕಾಗಿ ಮಾನವೀಯ ಕಾರಿಡಾರ್ಗಳನ್ನು ರಷ್ಯಾ ಸರ್ಕಾರ ತೆರೆಯುತ್ತಿದ್ದು, ಇಂದು ರಷ್ಯಾದ ಸಮಯ ಬೆಳಿಗ್ಗೆ 10ರಿಂದ ಕದನ ವಿರಾಮ ಘೋಷಣೆ ಮಾಡಲಾಗಿದೆ. ರಷ್ಯಾ ಹಾಗೂ ಉಕ್ರೇನ್ ಮಧ್ಯೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ನಿರ್ಧಾರ ಅಥವಾ ಒಪ್ಪಂದಕ್ಕೆ ಬಂದಿಲ್ಲ.