Sunday, June 8, 2025

ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಲ್ಲಿ ತರಬೇತಿ ಕಾರ್ಯಾಗಾರ; ಮಾ.15 ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ

ಉಡುಪಿ: ಸ್ವ ಉದ್ಯೋಗ, ಉಚಿತ ತರಬೇತಿ ಮತ್ತು ಉದ್ಯೋಗ ಅವಕಾಶವನ್ನು ಸೃಷ್ಟಿಸುವ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ 3ನೇ ಆವೃತ್ತಿಯ ಮಣಿಪಾಲದ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ರೋಮನ್ ಸೆಂಟರ್ ಹೆಡ್ ರಾಘವೇಂದ್ರ ರಾವ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ-ಕಾಲೇಜು ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದೇ ಇರುವವರು/ಅರ್ಧದಲ್ಲೇ ಬಿಟ್ಟಿರುವವರು ಹಾಗೂ ಉದ್ಯೋಗ ಅವಕಾಶದಿಂದ ವಂಚಿತರಾಗಿರುವವರಿಗೆ ತರಬೇತಿ ನೀಡಲಾಗುತ್ತದೆ. 15-45 ವರ್ಷದ ವರೆಗಿನ ಯುವಕ-ಯುವತಿಯರು, ಮಹಿಳೆ-ಪುರುಷರಿಗಾಗಿ ಕೇಂದ್ರ ಸರ್ಕಾರ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.
ಆಸಕ್ತರು ಮಾ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಂದು ಬ್ಯಾಚ್‌ನಲ್ಲಿ 30-40 ಮಂದಿಗೆ ಅವಕಾಶವಿದೆ. ಆಧಾರ್ ಕಾರ್ಡ್, 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ, ಪಿಯುಸಿ , ಪದವಿ ಅಂಕಪಟ್ಟಿ, ಬ್ಯಾಂಕ್ ಖಾತೆಯ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು. ಬೆಳಗ್ಗೆ 9ರಿಂದ 1 ಗಂಟೆವರೆಗೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆವರೆಗೆ ತರಬೇತಿ ನೀಡಲಾಗುತ್ತದೆ ತಿಳಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles