Sunday, June 8, 2025

ಸಮರ್ಪಕವಾಗಿ ನೀರು ಸರಬರಾಜಾಗದೆ ಸಾರ್ವಜನಿಕರ ಪರದಾಟ; ಕಾಂಗ್ರೆಸ್ ಸದಸ್ಯರಿಂದ ಧರಣಿ

ಕಾರ್ಕಳ: ಕಳೆದ ಹಲವು ದಿನಗಳಿಂದ ವಿದ್ಯುತ್ ವ್ಯತ್ಯಯದಿಂದಾಗಿ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ನೀರು ಸರಬರಾಜಾಗದೇ ಸಾರ್ವಜನಿಕರು ಕಷ್ಟ ಪಡುತ್ತಿರುವುದನ್ನು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಕಾರ್ಕಳ ಪುರಸಭೆ ಕಛೇರಿಯಲ್ಲಿ ಮಂಗಳವಾರ ಧರಣಿ ನಡೆಸಿದರು.

ಈ ಕುರಿತು ಪುರಸಭಾ ಆಡಳಿತದ ಗಮನಕ್ಕೆ ತಂದಿದ್ದರೂ ಕನಿಷ್ಠ ಪಕ್ಷ ತಾತ್ಕಾಲಿಕ ನೆಲೆಯಲ್ಲಿ ಜನರೇಟರ್ ವ್ಯವಸ್ಥೆ ಮಾಡದೇ ಇದ್ದು, ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಊರಿನಲ್ಲಿ ಮಾರಿಪೂಜೆ ಆಚರಣೆಯಾಗುತ್ತಿದ್ದು, ಜನರು ನೀರಿಲ್ಲದೆ ಪರದಾಡುವಂತಾಗಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಸಂದರ್ಭ ವಿಪಕ್ಷ ನಾಯಕ ಅಷ್ಪಕ್ ಅಹಮ್ಮದ್, ಪುರಸಭಾ ಸದಸ್ಯರಾದ ಶುಭೋದ್ ರಾವ್, ಪ್ರತಿಮಾ ರಾಣೆ, ರೆಹಮತ್ ಶೇಖ್, ವಿನ್ನಿ ಬೋಲ್ಡ್ ಮೆಂಡೋನ್ಸ್, ಸೀತಾರಾಮ್, ಹರೀಶ್, ಪ್ರಭಾ ಮೊದಲಾದವರು ಉಪಸ್ಥಿತರಿದ್ದರು

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles