ಹೆಬ್ರಿ: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ. ಮಾ.10ರಿಂದ 20ರವರೆಗೆ ನಡೆಯುವ ಅದ್ದೂರಿ ಕಾರ್ಕಳ ಉತ್ಸವದ ಪ್ರಯುಕ್ತ ಹಾಗೂ ಮಾ.12ರಂದು ಹೆಬ್ರಿಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಹೆಬ್ರಿ ಚೈತನ್ಯ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಹೆಬ್ರಿ ತಹಸೀಲ್ದಾರ್ ಪುರಂದರ್ ಕೆ ವಹಿಸಿದ್ದರು. ಸಭೆಯಲ್ಲಿ ಮಾ.9 ಹೆಬ್ರಿ ಪೇಟೆಯ ಪ್ರಮುಖ ರಸ್ತೆಯಲ್ಲಿ ಉತ್ಸವ ಸ್ವಚ್ಚತೆಯ ಬಗ್ಗೆ ಹಾಗೂ ಮಾ.12ರಂದು ಹೆಬ್ರಿಯಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಶಶಿಧರ್, ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ.ಎಮ್, ವಲಯ ಅರಣ್ಯಾಧಿಕಾರಿ ಗೌರವ್ ಹಾಗೂ ಪ್ರಮುಖರಾದ ಗುರುದಾಸ್ ಶೆಣೈ. ಸತೀಶ್ ಪೈ. ಹೆಬ್ರಿ ಗ್ರಾ.ಪಂ. ಅಧ್ಯಕ್ಷರು ಸೇರಿದಂತೆ ವಿವಿಧ ಗ್ರಾ.ಪಂ.ಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಶಾಲಾ ಕಾಲೇಜಿನ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.