ಹೆಬ್ರಿ: ತುಳುಭಾಷೆ ಉಳಿದಿರುವುದು ದೈವರಾಧನೆಯ ಕೊಡಿಯಡಿಯಿಂದ ಮಾತ್ರ. ಅಪೂರ್ವ ಕಾರಣೀಕ ಕ್ಷೇತ್ರವಾದ ತಿಂಗಳೆಯಿಂದಲೂ ತುಳು ಉಳಿಸುವ ಕೈಂಕರ್ಯದ ಜೊತೆಗೆ ಧರ್ಮ ಕಲೆ ಸಾಹಿತ್ಯೋತ್ಸವದ ಸೇವೆ ನಡೆಯುತ್ತಿದೆ. ಧರ್ಮ ಕಲೆಯ ಜೊತೆಗೆ ದೇಶವನ್ನು ಉಳಿಸುವ ನಡೆಯಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಮಂಗಳವಾರ ಹೆಬ್ರಿ ಸಮೀಪದ ತಿಂಗಳೆ ಗರಡಿಯಲ್ಲಿ ನಡೆದ ಧರ್ಮ ಕಲೆ ಸಾಹಿತ್ಯೋತ್ಸವದ 61ನೇಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಿಕ್ಕಮಗಳೂರು ವೇದ ವಿಜ್ಞಾನ ಮಂದಿರದ ಕೆ.ಎಸ್.ನಿತ್ಯಾನಂದ ಆಶೀರ್ವಚನ ನೀಡಿದರು. ಹಾಗೂ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಚನ ತಂತ್ರ ಬಗ್ಗೆ ಡಾ.ವೀಣಾ ಬನ್ನಂಜೆ, ಜೀವನ ತಂತ್ರ ಬಗ್ಗೆ ಪತ್ರಕರ್ತರಾದ ವಸಂತ ಗಿಳಿಯಾರು, ಮತ್ತು ಆರಾಧನೆ ತಂತ್ರ ಶ್ರೀಕಾಂತ್ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಯಕ್ಷಮಾಣಿಕ್ಯ ಹೊನ್ನಾವರ ಮಾಳಕೋಡಿನ ಚಿಂತನ ಹೆಗಡೆ ಅವರನ್ನು ಗೌರವಿಸಲಾಯಿತು. ನಂತರ ವಿವಿಧ ದೈವಗಳ ನೇಮೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ದಿವಾಕರ ಪೂಜಾರಿ ಜಾರಿಗೆಕಟ್ಟೆ, ತಲ್ಲೂರು ಶಿವರಾಮ ಶೆಟ್ಟಿ, ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ, ಕೆಳಚಾವಡಿ ಪ್ರಕಾಶ ಶೆಟ್ಟಿ, ಕೆಳಚಾವಡಿ ಅಣ್ಣಪ್ಪ ಶೆಟ್ಟಿ, ಸುಚರಿತಾ ಎಸ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಉಪಸ್ಥಿತರಿದ್ದರು.