ಕಾರ್ಕಳ: ಕಾರ್ಕಳ ಉತ್ಸವದ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳ ಗಾಂಧಿ ಮೈದಾನದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಅಭಿವೃದ್ದಿ ದೃಷ್ಠಿಯಲ್ಲಿ ಅನೇಕ ಕಲ್ಪನೆ ಇರಿಸಿಕೊಂಡಿರುವ ಸಚಿವರು ಕಾರ್ಕಳಕ್ಕೆ ಅನುದಾನ ತರಿಸಿಕೊಂಡು ಅಭಿವೃದ್ಧಿ ಮಾಡುತ್ತಿದ್ದಾರೆ ಇದಕ್ಕೆ ಇಚ್ಚಾಶಕ್ತಿ ಬೇಕು ಹೊರತು ಅಪನಂಬಿಕೆಯಲ್ಲ. ಅಭಿವೃದ್ಧಿ ದೃಷ್ಟಿಯಲ್ಲಿ ರಾಜಕೀಯವಿಲ್ಲ, ಗ್ರಾಮೀಣ ಭಾಗಗಳ ಸಂಸ್ಕೃತಿಯನ್ನು ಚಿಗುರಿಸುವಂತಾಗಬೇಕು ದಾಖಲೀಕರಣವಾಗಬೇಕು ಎಂದರು.
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಮಾತನಾಡಿ ಸಾಧನೆಗಳು ನಿಂತ ನೀರಾಗಬಾರದು ಅದನ್ನು ಪೀಳಿಗೆಯಿಂದ ಪೀಳಿಗೆಗೆ ಹಂಚಿ ಹೋಗುತ್ತಿರಬೇಕು. ಸ್ವರ್ಣ ಕಾರ್ಕಳ ಕಲ್ಪನೆಗೆ ಸಲಹೆ ಇರಲಿ ಟೀಕೆಗಳು ಬೇಡ ಎಂದರು.
ಕಾರ್ಯಕ್ರಮದಲ್ಲಿ ಮoಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್.ವೈ, ಜಿ.ಪೋಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಸಹಾಯಕ ಆಯುಕ್ತ ರಾಜು, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕ್ಯಾಪ್ಟನ್ ಗಣೇಶ್ ಕಾರ್ನಿಕ್, ಕನ್ನಡ ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಉಪಸ್ಥಿತರಿದ್ದರು.
ಈ ಸಂದರ್ಭ ಈಜುವ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಗೈದ ವಿದ್ಯಾ ಪೈ ಅಜೆಕಾರು ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ಪಟು ರೋಹಿತ್ ಕುಮಾರ್ ಕಟೀಲು ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಸಾಣೂರು ನರಸಿಂಹ ಕಾಮತ್ ಸ್ವಾಗತಿಸಿ, ಪ್ರಭಾಕರ ಕೊಂಡಳ್ಳಿ ಹಾಗೂ ಸೌಜನ್ಯ ನಿರೂಪಿಸಿದರು.