Sunday, June 8, 2025

ಒಣಹುಲ್ಲು ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ

ಕುಂದಾಪುರ: ಒಣಹುಲ್ಲು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಬೆಂಕಿ ಹತ್ತಿದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗಿರಿಜಾ ಚಂದ್ರಶೇಖರ್‌ ಹೆಗ್ಡೆ ಸ. ಹಿ. ಪ್ರಾ. ಶಾಲೆಯ ಎದುರು ಶನಿವಾರ ಸಂಭವಿಸಿದೆ.

ಶಿಕಾರಿಪುರದಿಂದ ಕೊರ್ಗಿಗೆ ಜಾನುವಾರುಗಳ ಮೇವಿಗಾಗಿ ವಾಹನವೊಂದು ಬೈಹುಲ್ಲು ಸಾಗಿಸುತ್ತಿತ್ತು. ಈ ವಾಹನ ಶಾಲಾ ಸಮೀಪ ಬರುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್‌ ತಂತಿ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದಿದೆ.

ಬೆಂಕಿ ತಗುಲಿದ ಪರಿಣಾಮ ವಾಹನದಲ್ಲಿದ್ದ ಸುಮಾರು 30ಸಾವಿರಕ್ಕೂ ಅಧಿಕ ಮೊತ್ತದ ಹುಲ್ಲು ಹಾನಿಯಾಗಿದೆ. ಚಾಲಕನ ಸಮಯ ಪ್ರಜ್ಞೆ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವನೀಯ ಅನಾಹುತ ತಪ್ಪಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles