ಉದ್ಯಾವರ: ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಂಟೈನರ್ಗೆ ಟ್ಯಾಂಕರ್ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರ ಸೇತುವೆ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಉದ್ಯಾವರ ಸೇತುವೆ ಬಳಿ ನಿಲ್ಲಿಸಿದ್ದ ಕಂಟೈನರ್ಗೆ ಮಂಗಳೂರಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಟ್ಯಾಂಕರ್ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ.
ಕೆಟ್ಟು ನಿಂತಿದ್ದ ಕಂಟೈನರ್ಗೆ ಟ್ಯಾಂಕರ್ ಡಿಕ್ಕಿ
Subscribe
Login
0 Comments