ಕುಂದಾಪುರ: ಕೆಲವು ದಿನಗಳ ಹಿಂದೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ವಂಡ್ಸೆ ಗ್ರಾ.ಪಂ. ಸದಸ್ಯೆ ಗೀತಾ ಮತ್ತು ಅವಿನಾಶ್ ಅವರು ಮಂಗಳವಾರ ಮಾತೃ ಪಕ್ಷವಾದ ಕಾಂಗ್ರೆಸ್ಸಿಗೆ ವಾಪಾಸ್ಸಾಗಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಶೆಟ್ಟಿ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಧ್ವಜ ಹಿಡಿದು ಪಕ್ಷಕ್ಕೆ ಮರಳಿದರು.
ಈ ಸಂದರ್ಭ ಪಂ. ಸದಸ್ಯ ಗೋವರ್ಧನ ಜೋಗಿ, ಮಾಜಿ ತಾ.ಪಂ ಸದಸ್ಯ ಉದಯ ಪೂಜಾರಿ ಉಪಸ್ಥಿತರಿದ್ದರು.