ಉಡುಪಿ: ಹಿಜಾಬ್ ಪ್ರಕರಣದ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ನಾವೆಲ್ಲರೂ ಗೌರವಿಸಬೇಕು. ತೀರ್ಪುಗೆ ಸಂಬಂಧಿಸಿದಂತೆ ಯಾವುದೇ ಪೋಸ್ಟರ್, ಮೆರವಣಿಗೆ, ಸಭೆ-ಸಮಾರಂಭ, ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ.
ಹಿಜಾಬ್ ತೀರ್ಪಿನ ಹಿನ್ನಲೆಯಲ್ಲಿ ಉಡುಪಿ ಜಲ್ಲಾಧಿಕಾರಿ ಹಾಗೂ ಎಸ್ಪಿ ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಬುಧವಾರ ಭೇಟಿ ನೀಡಿದರು.
ಉಡುಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲಾ ಶಾಲಾ-ಕಾಲೇಜುಗಳ 200ಮೀ. ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಲಾಗಿದೆ. ತೀರ್ಪಿನ ಹಿನ್ನಲೆಯಲ್ಲಿ ನಿನ್ನೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಎಲ್ಲಾ ಶಾಲಾ-ಕಾಲೇಜುಗಳು ಎಂದಿನಂತೆ ಪುನರ್ ಆರಂಭವಾಗಿದೆ. ಉಡುಪಿ ಜಿಲ್ಲೆಯ ಸಾರ್ವಜನಿಕರು ಹೈಕೋರ್ಟ್ನ ತೀರ್ಪನ್ನು ಗೌರವಿಸಿ, ಅದರಂತೆ ನಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದರು.