Sunday, June 8, 2025

ಮೆಸ್ಕಾಂ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ; ಅಕ್ರಮ ಆಸ್ತಿ ವಶಕ್ಕೆ

ಮಂಗಳೂರು: ನಗರದ ಮೆಸ್ಕಾಂ ಅಧಿಕಾರಿ ದಯಾಳ್ ಸುಂದರ್ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ತಂಡ ಬುಧವಾರ ಬೆಳಗ್ಗೆ ದಾಳಿ ಮಾಡಿದೆ.

ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್ ಸುಂದರ್ ಅವರ ಮೈಸೂರಿನ ಎರಡು ಸೈಟ್, ಹುಣಸೂರಿನ ಒಂದು ಸೈಟ್ ಮತ್ತು 2 ಎಕರೆ ಕೃಷಿ ಭೂಮಿಯ ದಾಖಲೆ ಪತ್ರಗಳನ್ನು, ಮಂಗಳೂರಿನ ಕದ್ರಿ ಕಂಬಳ ಬಳಿ ಡಬಲ್ ಬೆಡ್ ರೂಂ ಫ್ಲಾಟ್, ಮಂಗಳೂರಿನ ಬೆಂದೂರ್ ವೆಲ್‌ನ ಬಾಡಿಗೆ ಮನೆಯಲ್ಲಿ 4 ಕೆ.ಜಿ ಬೆಳ್ಳಿ, 300 ಗ್ರಾಂ ಚಿನ್ನ ಹಾಗೂ ನಗದನ್ನು ಎಸಿಬಿ ತಂಡ ವಶಕ್ಕೆ ಪಡೆದಿದೆ.

ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಮೆಸ್ಕಾಂ ಇಲಾಖೆಯಲ್ಲಿರುವ ದಯಾಳ್ ಅವರ ಹೆಸರಿನಲ್ಲಿ ಹಲವೆಡೆ ಸೈಟ್‌ಗಳನ್ನು ಮೆಸ್ಕಾಂ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇವರು ಮಂಗಳೂರು ಹಾಗೂ ಮೈಸೂರಿನಲ್ಲಿ ಅಪಾರ ಅಕ್ರಮ ಆಸ್ತಿ ಮಾಡಿದ್ದಾರೆ. ಮಂಗಳೂರು ಎಸಿಬಿ ಎಸ್ಪಿ, ಡಿವೈಎಸ್ಪಿ ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ತಂಡ ದಯಾಳ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles