ಸುಳ್ಯ: ಹಿಜಾಬ್ ಕುರಿತು ಮಾನ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿ ಮುಸ್ಲಿಂ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ಗೆ ಕರೆ ಹಿನ್ನಲೆ ಸುಳ್ಯ ನಗರದ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಂಗಡಿಗಳನ್ನು ಮುಚ್ಚಲಾಗಿತ್ತು.
ಸುಳ್ಯದ ಗಾಂಧಿನಗರ, ಬಾಳೆ ಮಕ್ಕಿ, ಶ್ರೀರಾಮ ಪೇಟ್, ಹಳೆಗೇಟು, ಪೈಚಾರು, ಕುರುಂಜಿಭಾಗ್, ಜೂನಿಯರ್ ಕಾಲೇಜು ರಸ್ತೆ ಸೇರಿದಂತೆ ಹಲವಾರು ಕಡೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರು ತಮ್ಮ ತಮ್ಮ ವ್ಯಾಪಾರ ಮಳಿಗೆಗಳನ್ನು ಮುಚ್ಚಲಾಗಿತ್ತು.