ಕುಂದಾಪುರ: ಹಿಜಾಬ್ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪುಗೆ ಅಸಮಾಧಾನ ವ್ಯಕ್ತ ಪಡಿಸಿ ವಿವಿಧ ಮುಸ್ಲಿಂ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಗೆ ಕುಂದಾಪುರ, ಬೈಂದೂರು ತಾಲೂಕಿನ ಮುಸ್ಲಿಂ ಸಮುದಾಯದವರ ಅಂಗಡಿಗಳನ್ನು ಮುಚ್ಚಲಾಗಿತ್ತು.



ಕುಂದಾಪುರ ನಗರದಲ್ಲಿ ಮುಸ್ಲಿಂ ಸಮುದಾಯದ ಮಾಲೀಕತ್ವದ ಮಟನ್, ಚಿಕನ್ ಸ್ಟಾಲ್, ಹಣ್ಣಿನಂಗಡಿ, ಚಪ್ಪಲಿಯಂಗಡಿ, ಫ್ಯಾನ್ಸಿ ಸ್ಟೋರ್ಗಳು ಗುರುವಾರ ಬೆಳಗ್ಗೆಯಿಂದಲೇ ಬಂದ್ ಮಾಡಲಾಗಿದೆ. ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿದ್ದಾರೆ.


ಅತೀ ಹೆಚ್ಚು ಮುಸ್ಲಿಂ ವರ್ತಕರಿರುವ ಗಂಗೊಳ್ಳಿಯಲ್ಲೂ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.