ಬೆಳ್ಮಣ್: ಕಾರ್ಕಳ ತಾಲೂಕಿನ ಇತಿಹಾಸ ಪ್ರಸಿದ್ದ ನಾಲ್ಕುಸ್ಥಾನ ನಂದಳಿಕೆಯ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರಸಿದ್ಧ ನಂದಳಿಕೆ ಅಯನೋತ್ಸವ ಸಿರಿಜಾತ್ರೆ ಶುಕ್ರವಾರ ವೈಭವದಿಂದ ನಡೆಯಿತು.
ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಚಾವಡಿ ಅರಮನೆ ಎನ್. ಸುಂದರರಾಮ ಹೆಗ್ಡೆಯವರ ಮಾರ್ಗದರ್ಶನದಲ್ಲಿ, ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆಯವರ ನೇತೃತ್ವದಲ್ಲಿ ಹಾಗೂ ಸ್ವಯಂ ಸೇವಕರ ಸಹಾಯದೊಂದಿಗೆ ಸಿರಿಜಾತ್ರೆ ಸಂಪನ್ನವಾಯಿತು.
ಶುಕ್ರವಾರ ಬೆಳಿಗ್ಗೆ ಶ್ರೀ ಉರಿ ಬ್ರಹ್ಮರ ರಜತ ಪಾದುಕೆ , ಶ್ರೀ ಅಬ್ಬಗ ದಾರಗರ ಚೆನ್ನೆಮಣೆಗಳ ಸಾಲಂಕೃತ ಮೆರವಣಿಗೆ, ಮಧ್ಯಾಹ್ನ ಶ್ರೀ ಆಲಡೆಯಲ್ಲಿ ಶ್ರೀ ಅಣ್ಣಪ್ಪ ದರ್ಶನ, ಹಸಿಮಡಲು ಚಪ್ಪರ ಕಟ್ಟೆಪೂಜೆ ಸೇವೆ, ಹಾಗೂ ಶ್ರೀ ದೇವರ ಮಹೋತ್ಸವ ಬಲಿ ಮಹಾಪೂಜೆ ಪ್ರಸಾದ ವಿತರಣೆ, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಜಾತ್ರೆಗೆ ಅಸಂಖ್ಯಾತ ಭಕ್ತರು ಬಂದು ದೇವರ ದರ್ಶನ ಪಡೆದು ಪುನೀತರಾದರು.