Saturday, June 28, 2025

ರಾಷ್ಟ್ರೀಯ ಹೆದ್ದಾರಿಯಿಂದ ಕುಂದಾಪುರ ನಗರಕ್ಕೆ ಸರ್ವೀಸ್ ರಸ್ತೆ ತೆರೆಯಲು ಒತ್ತಾಯ; ಹೆದ್ದಾರಿ ಯೋಜನಾ ನಿರ್ದೇಶಕ ಸ್ಥಳಕ್ಕೆ ಭೇಟಿ

ಕುಂದಾಪುರ: ನಗರಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಪ್ರವೇಶ ನೀಡಬೇಕು ಎನ್ನುವ ಒತ್ತಾಯಕ್ಕೆ ಹೆದ್ದಾರಿ ಯೋಜನಾ ನಿರ್ದೇಶಕ ಲಿಂಗೇಗೌಡ ಅವರು ಶುಕ್ರವಾರ ಪ್ರಸ್ತಾವಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಂದಾಪುರ ಎಲ್.ಐ.ಸಿ ರಸ್ತೆ ಹತ್ತಿರ ಮೆಸ್ಕಾಂ ಕಛೇರಿ ಎದುರುಗಡೆ ಕುಂದಾಪುರ ನಗರಕ್ಕೆ ಪ್ರವೇಶ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಎರಡುವರೆ ತಿಂಗಳ ಒಳಗಡೆ ಕಾರ್ಯಗತಗೊಳ್ಳಲಿದೆ. ಇಲ್ಲಿ ಸರ್ವೀಸ್ ರಸ್ತೆಯನ್ನು ವಿಸ್ತಾರಗೊಳಿಸಿಕೊಂಡು ಹೆದ್ದಾರಿ ಮಟ್ಟದಲ್ಲಿಯೇ ನಗರಕ್ಕೆ ಪ್ರವೇಶ ನೀಡಲಾಗುವುದು. ಅದೇ ರೀತಿ ಆಚೆ ಕಡೆಯಲ್ಲಿಯೂ ಕೂಡಾ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಾ.30ರ ಒಳಗೆ ಮೇಲ್ಸೇತುವೆಗೆ ದಾರಿದೀಪಗಳ ಅಳವಡಿಸಲಾಗುತ್ತದೆ. ಅದೇ ರೀತಿ ಹೆದ್ದಾರಿ ದಾಟುವ ಕುರಿತಂತೆ ವಿದ್ಯಾರ್ಥಿಗಳ ಬೇಡಿಕೆಗೂ ಸ್ಪಂದಿಸಲಾಗುತ್ತದೆ ಎಂದರು.

ಈ ಸಂದರ್ಭ ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ಹೆದ್ದಾರಿ ಹೋರಾಟ ಸಮಿತಿ ಕೆಂಚನೂರು ಸೋಮಶೇಖರ ಶೆಟ್ಟಿ, ಬಿ.ಕಿಶೋರ್ ಕುಮಾರ್, ರಾಜೇಶ ಕಾವೇರಿ, ವಿವೇಕ್ ನಾಯಕ್, ಪುರಸಭಾ ಸದಸ್ಯರಾದ ಪ್ರಭಾಕರ, ಶೇಖರ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ರೋಹಿಣಿ ಉದಯಕುಮಾರ್, ವನಿತಾ ಬಿಲ್ಲವ, ರಾಘವೇಂದ್ರ ಖಾರ್ವಿ ಹಾಗೂ ಅವಿನಾಶ್ ಉಳ್ತೂರು, ರಾಘವೇಂದ್ರ ಶೇಟ್, ಸತೀಶ್ ಪೂಜಾರಿ, ನಾಗರಾಜ್ ಆಚಾರ್ಯ, ಸುರೇಂದ್ರ ಕಾಂಚನ್, ಅಭಿಷೇಕ್ ಮತ್ತಿತರರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles