ಕಾಪು: ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಕಾಪು – ಪಡು ಇದರ ಆಶ್ರಯದಲ್ಲಿ ಮಧ್ಯಾಹ್ನ 12:30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8ಕ್ಕೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮ ಮತ್ತು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮಂಡಳಿ ಇವರಿಂದ ಸಾರ್ವಜನಿಕ ಹರಕೆಯ ಯಕ್ಷಗಾನ ಬಯಲಾಟ ಶ್ರೀ ಶನೀಶ್ವರ ಮಹಾತ್ಮೆ ಜರಗಲಿದೆ. ಈ ಪ್ರಯುಕ್ತ ಭಾನುವಾರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್, ಹೊಸ ಮಾರಿಗುಡಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ದಾರ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ ಶೆಟ್ಟಿ ಬಾಲಾಜಿ, ಪುರಸಭಾ ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಮತ್ತು ಕ್ಲಬ್ ನ ಕೋಶಾಧಿಕಾರಿ ಅನಿಲ್ ಕುಮಾರ್ ಪಾಡಿಮನೆ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.