Monday, June 9, 2025

ಸುಮನಸಾದ ರಾಷ್ಟ್ರೀಯ ರಂಗಹಬ್ಬ ‘ಬಹುಭಾಷಾ ನಾಟಕೋತ್ಸವ’ಕ್ಕೆ ಚಾಲನೆ

ಉಡುಪಿ: ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಾಷ್ಟ್ರೀಯ ರಂಗಹಬ್ಬ ‘ಬಹುಭಾಷಾ ನಾಟಕೋತ್ಸವ’ಕ್ಕೆ ಉಡುಪಿಯ ಅಜ್ಜರಕಾಡು ಬಯಲು ಮಂದಿರದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ನಾಟಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ, ನಾಟಕಕಾರ ಡಾ.ರಾಜಪ್ಪ ದಳವಾಯಿ ಕಟ್ಟಡಗಳನ್ನು ಕಟ್ಟುವವರು ಎಲ್ಲೆಡೆ ಇದ್ದಾರೆ. ಆದರೆ ಮನಸ್ಸುಗಳನ್ನು ಕಟ್ಟುವವರ ಸಂಖ್ಯೆ ಕಡಿಮೆ ಇದೆ. ಮನಸ್ಸುಗಳನ್ನು ಕಟ್ಟುವ, ಬೆಸೆಯುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದರು.
ಈ ಸಂದರ್ಭ ರಾಜ್‌ಗೋಪಾಲ್‌ ಶೇಟ್‌ ಅವರಿಗೆ ರಂಗಸಾಧಕ ಸನ್ಮಾನ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಶಾಸಕ ರಘುಪತಿ ಭಟ್‌, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ರಥಬೀದಿ ಗೆಳೆಯರು ಅಧ್ಯಕ್ಷ ಮುರಳೀಧರ ಉಪಾಧ್ಯ ಹಿರಿಯಡ್ಕ, ಕೊಡವೂರು ಶಂಕರ ನಾರಾಯಣ ದೇವಸ್ಥಾನದ ಅಧ್ಯಕ್ಷ ಸಾಧು ಸಾಲ್ಯಾನ್‌, ಉದ್ಯಮಿ ಅಮೃತ್‌ ಶೆಣೈ, ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್‌ ಭಟ್‌, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ, ಸುಮನಸಾ ಸಂಸ್ಥೆಯ ಗೌರವಾಧ್ಯಕ್ಷ ಎಂ.ಎಸ್‌. ಭಟ್‌, ಸಂಚಾಲಕ ಭಾಸ್ಕರ ಪಾಲನ್ ಬಾಚನಬೈಲು ಉಪಸ್ಥಿತರಿದ್ದರು.
ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿ, ಕಾರ್ಯದರ್ಶಿ ಜೀವನ್‌ಕುಮಾರ್‌ ವಂದಿಸಿ, ಅಕ್ಷತ್‌ ಅಮೀನ್‌ ಕಾರ್ಯಕ್ರಮ ನಿರೂಪಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles