Sunday, June 8, 2025

ಕೃಷ್ಣಮೃಗ ಬೇಟೆ ಪ್ರಕರಣ; ಸಲ್ಮಾನ್ ಖಾನ್ ಮನವಿಗೆ ಅಸ್ತು ಎಂದ ರಾಜಸ್ಥಾನ ಹೈಕೋರ್ಟ್

ರಾಜಸ್ಥಾನ: ಜೋಧ್​ಪುರ್ ಕೋರ್ಟ್​ನಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದ ಎರಡು ಅರ್ಜಿಗಳನ್ನು ವಿಚಾರಣೆ ಮಾಡಲಾಗುತ್ತಿದ್ದು, ಇದನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಸಲ್ಮಾನ್ ಖಾನ್ ಮನವಿ ಮಾಡಿದ್ದರು. ಇದೀಗ ಹೈಕೋರ್ಟ್ ಅವರ ಮನವಿಗೆ ಅನುಮತಿ ನೀಡಿದೆ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ  ರಾಜಸ್ಥಾನದ ಜೋಧ್‌ಪುರಕ್ಕೆ ಚಿತ್ರತಂಡ ತೆರಳಿತ್ತು. ಈ ವೇಳೆ ಸಿನಿಮಾ ತಂಡದವರ ಜೊತೆ ಸಫಾರಿಗಾಗಿ ತೆರಳಿದ್ದು, ಈ ಸಂದರ್ಭ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಬೇಟೆಯಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್​ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಅವರು ಜಾಮೀನು ಪಡೆದು ಹೊರಬಂದಿದ್ದರು.

ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಬೇಟೆಯಾಡಿದ ಅಪರಾಧಕ್ಕಾಗಿ ಸಲ್ಮಾನ್ ಖಾನ್ ಗೆ ರಾಜಸ್ಥಾನದ ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥರೆಂದು ಪರಿಗಣಿಸಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ರಾಜಸ್ಥಾನ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸೆಷನ್​ ಕೋರ್ಟ್​ನಲ್ಲಿರುವ 2 ಅರ್ಜಿಗಳು ಹೈಕೋರ್ಟ್​ಗೆ ವರ್ಗಾವಣೆಗೊಂಡರೆ 3 ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬಹುದು ಎಂದು ಸಲ್ಮಾನ್​ ಖಾನ್ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಇದೀಗ ಹೈಕೋರ್ಟ್​ ಅನುಮತಿ ನೀಡಿದೆ.   

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles