ರಾಜಸ್ಥಾನ: ಜೋಧ್ಪುರ್ ಕೋರ್ಟ್ನಲ್ಲಿ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದ ಎರಡು ಅರ್ಜಿಗಳನ್ನು ವಿಚಾರಣೆ ಮಾಡಲಾಗುತ್ತಿದ್ದು, ಇದನ್ನು ರಾಜಸ್ಥಾನ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಸಲ್ಮಾನ್ ಖಾನ್ ಮನವಿ ಮಾಡಿದ್ದರು. ಇದೀಗ ಹೈಕೋರ್ಟ್ ಅವರ ಮನವಿಗೆ ಅನುಮತಿ ನೀಡಿದೆ.
1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ಗಾಗಿ ರಾಜಸ್ಥಾನದ ಜೋಧ್ಪುರಕ್ಕೆ ಚಿತ್ರತಂಡ ತೆರಳಿತ್ತು. ಈ ವೇಳೆ ಸಿನಿಮಾ ತಂಡದವರ ಜೊತೆ ಸಫಾರಿಗಾಗಿ ತೆರಳಿದ್ದು, ಈ ಸಂದರ್ಭ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಬೇಟೆಯಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ನ್ಯಾಯಾಲಯ ಸಲ್ಮಾನ್ ಖಾನ್ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಅವರು ಜಾಮೀನು ಪಡೆದು ಹೊರಬಂದಿದ್ದರು.
ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಬೇಟೆಯಾಡಿದ ಅಪರಾಧಕ್ಕಾಗಿ ಸಲ್ಮಾನ್ ಖಾನ್ ಗೆ ರಾಜಸ್ಥಾನದ ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥರೆಂದು ಪರಿಗಣಿಸಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ರಾಜಸ್ಥಾನ ಹೈಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸೆಷನ್ ಕೋರ್ಟ್ನಲ್ಲಿರುವ 2 ಅರ್ಜಿಗಳು ಹೈಕೋರ್ಟ್ಗೆ ವರ್ಗಾವಣೆಗೊಂಡರೆ 3 ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬಹುದು ಎಂದು ಸಲ್ಮಾನ್ ಖಾನ್ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಇದೀಗ ಹೈಕೋರ್ಟ್ ಅನುಮತಿ ನೀಡಿದೆ.