ಕುಂದಾಪುರ: ನಮ್ಮ ಮನಸ್ಸು ಸುಸ್ಥಿತಿಯಲ್ಲಿರಬೇಕು, ಆಗ ಸಮಾಜದ ಅಭಿವೃದ್ಧಿ ಕೂಡ ಸಾಧ್ಯ. ಮನೆ-ಮನಗಳಲ್ಲಿರುವ ರಾಕ್ಷಸ ಪ್ರವೃತ್ತಿಯನ್ನು ಬಿಟ್ಟು ಆತ್ಮವಿಶ್ವಾಸ, ಮನೋಸ್ಥೈರ್ಯ, ದೇವರ ಮೇಲಿನ ನಂಬಿಕೆಯಿಂದ ಉತ್ತಮ ಜೀವನ ಸಾಧ್ಯ ಎಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಗಣೇಶ್ ಕಿಣಿ ಹೇಳಿದರು.
ಅವರು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಪೌಂಡೇಶನ್(ರಿ) ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಬೆಳ್ವೆ ವಲಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು ಬೆಳ್ವೆ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂದೇಶ ಕಿಣಿ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ)ಇದರ ಅಧ್ಯಕ್ಷ ಬಿ.ಸತೀಶ್ ಕಿಣಿ ವಹಿಸಿದ್ದರು.
ಈ ವೇಳೆ ಹಸಿರು ಇಂಧನ ಸಾಧನಗಳ ವಿತರಣೆ ಕಾರ್ಯಕ್ರಮ, ಗ್ರಾಮಾಭಿವೃದ್ದಿ ಯೋಜನೆಯ ಮಹತ್ವಾಕಾಂಕ್ಷಿ ಯೋಜನೆಗಳಾದ ಸೆಲ್ಕೊ ಸೋಲಾರ್, ಕುಕ್ ಸ್ಟವ್, ಮೈಕ್ರೋ ಬಚತ್, ಈ ಶ್ರಮ ಕಾರ್ಡ್ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭ ಶ್ರೀ.ಕ್ಷೇ.ಧ. ಗ್ರಾ.ಯೋಜನೆಯ ಕುಂದಾಪುರ ತಾಲೂಕಿನ ಹಿರಿಯ ಯೋಜನಾಧಿಕಾರಿ ಮುರುಳೀಧರ ಕೆ ಶೆಟ್ಟಿ, ವಾಸ್ತುತಜ್ಞ, ಪ್ರಸಂಗಕರ್ತ ಡಾ॥.ಕೆ.ಬಸವರಾಜ್ ಶೆಟ್ಟಿಗಾರ್, ಬೆಳ್ವೆ ಗ್ರಾ.ಪಂ.ಅಧ್ಯಕ್ಷ ಎಸ್.ಚಂದ್ರಶೇಖರ್ ಶೆಟ್ಟಿ, ಬೆಳ್ವೆ ಶ್ರೀ ಶಂಕರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಶಂಕರ್ ಶೆಟ್ಟಿ, ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ.ನಿ. ಅಧ್ಯಕ್ಷ ಎಸ್ ಜಯರಾಂ ಶೆಟ್ಟಿ, ವಲಯಾಧ್ಯಕ್ಷ ಉಮೇಶ್ ಹೆಗ್ಡೆ, ಒಕ್ಕೂಟದ ಅಧ್ಯಕ್ಷ ವಾಸು ಪೂಜಾರಿ, ಹೇಮಂತ್ ಪೂಜಾರಿ, ರವಿ ಪೂಜಾರಿ, ಪ್ರಭಾವತಿ, ಜಯಂತಿ, ಅರುಣ್ ಕುಮಾರ್ ಶೆಟ್ಟಿ, ಸುಮತಿ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಜಯಲಕ್ಷ್ಮೀ, ತಾಲೂಕಿನ ಕೃಷಿ ಅಧಿಕಾರಿ ಚೇತನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಲಯದ ಮೇಲ್ವಿಚಾರಕ ಸಂತೋಷ್ ಸ್ವಾಗತಿಸಿದರು. ತಂಡದ ಸದಸ್ಯೆ ಪಲ್ಲವಿ ಪ್ರಾರ್ಥಿಸಿದರು. ಸೇವಾಪ್ರತಿನಿಧಿ ಶ್ರೀಮತಿ ವಲಯದ ಸಾಧನಾ ವರದಿ ಮಂಡಿಸಿ, ಪ್ರಶಾಂತ್ ವಂದಿಸಿದರು.