Saturday, June 28, 2025

ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಅಪಪ್ರಚಾರ

ಮಂಗಳೂರು: ಹಿಂದೂ ವರ್ತಕರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ವೈರಲ್ ಆಗುತ್ತಿದ್ದು, ದ.ಕ ಜಿಲ್ಲೆಯ ಉಪ್ಪಿನಂಗಡಿಯ ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ.

ನಕಲಿ ಸಂದೇಶ ಸಾರಿದ ದುಷ್ಕರ್ಮಿಗಳ ವಿರುದ್ಧ ಉಪ್ಪಿನಂಗಡಿ ವರ್ತಕರ ಸಂಘ ಪೊಲೀಸರಿಗೆ ದೂರು ನೀಡಿದ್ದು, ಮತೀಯ ಸಂಘರ್ಷ ಮೂಡಿಸಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಆಗ್ರಹಿಸಿದ್ದಾರೆ.

ಉಪ್ಪಿನಂಗಡಿಯ 32 ಹಿಂದೂ ಅಂಗಡಿಗಳ ಹೆಸರು ಉಲ್ಲೇಖಿಸಿ ಆ ಅಂಗಡಿಗಳಿಂದ ಮುಸ್ಲಿಮರಿಗೆ ಯಾವುದೇ ಸಾಮಾಗ್ರಿಗಳನ್ನು ಕೊಡುವುದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಬೇಕರಿ, ಮೆಡಿಕಲ್, ಸೆಲೂನ್, ಜನರಲ್ ಸ್ಟೋರ್‌ಗಳ ಹೆಸರಲ್ಲಿ ಸಂದೇಶ ವೈರಲ್ ಆಗುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles