ಸುಳ್ಯ: ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮಣ್ಯದಲ್ಲಿ ಗೋ ಕಳ್ಳತನಕ್ಕೆ ಯತ್ನಿಸಿದ ದೃಶ್ಯ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜ್ಯದಲ್ಲಿ ಗೋ ಹತ್ಯೆ ನಿಷೇದ ಕಾನೂನು ಜಾರಿಯಲ್ಲಿದ್ದರೂ ಗೋ ಕಳ್ಳರ ಹಾವಳಿ ಮಾತ್ರ ನಿಲ್ಲುತ್ತಿಲ್ಲ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಪಾರ್ಕಿಂಗ್ ಜಾಗದ ಆಂಜನೇಯ ಗುಡಿಯ ಹಿಂಬಾಗದಲ್ಲಿ ಮಲಗಿದ್ದ ಗೋವನ್ನು ಕಳ್ಳರು ಕಾರಿನಲ್ಲಿ ತುಂಬಿಸಿ ಕದ್ದೊಯ್ಯಲು ಯತ್ನಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಗೋವು ಕಳ್ಳರ ಕೈಯಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದೆ. ಶುಕ್ರವಾರ ಸಿ ಸಿ ಕ್ಯಾಮರಾ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ವೈರಲ್ ಆಗಿದೆ.