ಉಡುಪಿ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಮಾ.28 ಮತ್ತು 29ರಂದು ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿರುವ ಅಖಿಲ ಭಾರತ ಮುಷ್ಕರಕ್ಕೆ ಉಡುಪಿ ಜಿಲ್ಲೆಯ 50ಕ್ಕೂ ಹೆಚ್ಚಿನ ಸಂಘಟನೆಗಳನ್ನು ಬೆಂಬಲ ಸೂಚಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಸಂಚಾಲಕ ಕೆ.ಶಂಕರ್, ಮಾ.28ರಂದು ಆಯಾ ಗ್ರಾಪಂ, ಪುರಸಭೆಗಳ ಮುಂಭಾಗ ಪ್ರತಿಭಟನೆ ನಡೆಸಿ, ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಮಾ.29ರಂದು ಬೆಳಗ್ಗೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಎರಡೂ ದಿನ ಉಡುಪಿ ಜಿಲ್ಲೆಯಲ್ಲಿ ನಡೆಯುವ ಮುಷ್ಕರದಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು, 13 ಸಾವಿರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು, ವಿವಿಧ ಬ್ಯಾಂಕ್ ನೌಕರರು ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಮಾ.28 ಮತ್ತು 29ರಂದು ಉಡುಪಿ, ಕಾರ್ಕಳ, ಕುಂದಾಪುರ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದೆ.