Sunday, June 8, 2025

ತುಳುನಾಡ ವೀರರ ಹೆಸರಲ್ಲಿ ರಾರಾಜಿಸಲಿದೆ ಪುತ್ತೂರು ಬಸ್‌ ನಿಲ್ದಾಣ

ಪುತ್ತೂರು: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದೆ.
ಕೆ.ಎಸ್.ಆರ್.ಟಿ.ಸಿ ಯು ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವ ಸಂಬಂಧ ನಿರ್ಣಯ ಕೈಗೊಂಡಿದ್ದು, ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಪ್ರಯತ್ನದ ಫಲವಾಗಿ ಯೋಜನೆ ಕೈಗೂಡಿದ್ದು, ಮುಂದಿನ ತಿಂಗಳು ನಾಮಕರಣ ಸಮಾರಂಭ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಾಸಕ ಮಠಂದೂರು ಈ ವಿಚಾರವನ್ನು ಖಚಿತಪಡಿಸಿದ್ದು, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಂ. ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ “ಕೋಟಿ ಚೆನ್ನಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಪುತ್ತೂರು’ ಎಂದು ನಾಮಕರಣ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಗಣ್ಯರ ಸಮಕ್ಷಮದಲ್ಲಿ ನಾಮಕರಣ ಸಮಾರಂಭ ಶೀಘ್ರವೇ ನಡೆಯಲಿದೆ ಎಂದು ತಿಳಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles