Sunday, June 8, 2025

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯೋಗ ಮಹೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತಮಹೋತ್ಸವದಲ್ಲಿ ಯೋಗ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಭಾರತ ಸರಕಾರದ ಆಯುಷ್ ಮಂತ್ರಾಲಯದ ಮೊರಾರ್ಜಿ ದೇಸಾಯಿ ಯೋಗ ಸಂಸ್ಥೆ ಮೂಲಕ ಯೋಗದ ನಾನಾ ಆಯಾಮಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಯೋಗ ಮಹೋತ್ಸವಕ್ಕೆ ಚಾಲನೆ ನೀಡಿದರು.

ಬೆಳ್ತಂಗಡಿ ತಾಲೂಕಿನ ಅನೇಕ ಕಡೆಗಳಲ್ಲಿ ಒಂದು ವಾರದ ಯೋಗ ಶಿಬಿರವನ್ನು ನಡೆಸಲಾಗಿದ್ದು, ಇಂದು 500ಕ್ಕೂ ಹೆಚ್ಚು ಶಿಬಿರಾಥಿಗಳ ಸಮ್ಮುಖದಲ್ಲಿ ಯೋಗ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಮುಖ್ಯಸ್ಥೆ ಗಾಯತ್ರಿ ಆರ್., ಮಂಗಳೂರು ವಲಯದ ಉಪ ಮುಖ್ಯಸ್ಥ ಆರ್.ಗೋಪಾಲ ಕೃಷ್ಣ, ಎಸ್.ಡಿ.ಎಂ.ಸಿ.ಎನ್.ವೈ.ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ, ಯೋಗ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತರಾಮ ತೋಳ್ಪಡಿತ್ತಾಯ, ಯೋಗ ವಿಭಾಗದ ಡೀನ್ ಶಿವಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles