ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಈ ಹಿಂದೆ ಇಬ್ರಾಹಿಂ ಪ್ರತಿಪಕ್ಷ ನಾಯಕ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡು ಕಾಗ್ರೆಂಸ್ನಿಂದ ದೂರ ಸರಿಯುವುದಾಗಿ ತಿಳಿಸಿದ್ದರು. ಈ ಹಿನ್ನಲೆ ಸಿಎಂ ಇಬ್ರಾಹಿಂ ಇಂದು ಬೆಳಿಗ್ಗೆ 11ಕ್ಕೆ ಸಭಾಪತಿ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದಾರೆ.