ಮಣಿಪಾಲ: ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಶಿವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಳ್ಳಿ ಗ್ರಾಮದ ರಾಮಚಂದ್ರ ಭಟ್ ಎಂದು ಗುರುತಿಸಲಾಗಿದೆ. ಇವರು ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ನೋಟ್ನಲ್ಲಿ “ನಾನು ಅನಾರೋಗ್ಯದಿಂದ ಜೀವನದಲ್ಲಿ ಬೇಸರಗೊಂಡು ವೈರಾಗ್ಯ ತಾಳಿ ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ಇದಕ್ಕೆ ಬೇರೆ ಯಾರು ಕಾರಣರಲ್ಲ. ಆರಕ್ಷಕ ಅಧಿಕಾರಿಗಳಲ್ಲಿ ವಿನಂತಿ ದಯಮಾಡಿ ಕೇಸ್ಬುಕ್ ಮಾಡಿ ಹೆಂಡತಿ ಮಕ್ಕಳಿಗೆ ತೊಂದರೆ ಕೊಡಬೇಡಿ” ಎಂದು ಬರೆದು ಸಹಿ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.