ಕುಂದಾಪುರ: ಮುಂದಿನ ಎರಡು ವರ್ಷಗಳ ಅವಧಿಗೆ ಕುಂದಾಪುರ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ವಕೀಲ ಬನ್ನಾಡಿ ಸೋಮನಾಥ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿ ಸೇರಿದಂತೆ ನಾಲ್ಕು ಮಂದಿ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಗೊಂಡ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಶುಕ್ರವಾರ ಚುನಾವಣೆ ನಡೆದಿತ್ತು. ಸಂಘದ ಕಚೇರಿಯಲ್ಲಿ ನಡೆದ ಬಾರ್ ಅಸೋಸಿಯೇಷನ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಬನ್ನಾಡಿ ಸೋಮನಾಥ ಹೆಗ್ಡೆ ಗೆಲುವು ಸಾಧಿಸಿದರು.
ಕಾರ್ಯದರ್ಶಿಯಾಗಿ ಶ್ರೀನಾಥ ರಾವ್, ಉಪಾಧ್ಯಕ್ಷರಾಗಿ ಬೀನಾ ಜೋಸೇಫ್, ಖಜಾಂಚಿ ದಿನಾಕರ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ರಿತೇಶ್ ಅವಿರೋಧವಾಗಿ ಆಯ್ಕೆಗೊಂಡರು.
ನೂತನ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆಯವರು 2010-12 ನೇ ಸಾಲಿನಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾಗಿದ್ದು ಅಂದಿನ ಅಧ್ಯಕ್ಷರು ಪದಾದಿಕಾರಿಗಳ ಸಹಕಾರದಲ್ಲಿ ಕುಂದಾಪುರಕ್ಕೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಬರಲು ಕಾರಣೀಭೂತರಾಗಿದ್ದರು. 2016-18 ನೇ ಸಾಲಿನಲ್ಲಿ ಅಧ್ಯಕ್ಷರಾಗಿದ್ದ ವೇಳೆ ಕುಂದಾಪುರದ ಬಾರ್ ಅಸೋಸಿಯೇಷನ್ ಕಟ್ಟಡ ಮಂಜೂರಾತಿ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.