ಬೆಳಗಾವಿ: ಅಂಕೋಲ ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.
2013ರ ಡಿ.21ರಂದು ಉ.ಕ. ಜಿಲ್ಲೆಯ ಅಂಕೋಲಾದಲ್ಲಿ ಉದ್ಯಮಿ ಆರ್.ಎನ್. ನಾಯಕ್ ಅವರನ್ನು 3ಕೋಟಿ ಹಫ್ತಾ ನೀಡದಿದ್ದಕ್ಕೆ ಸುಪಾರಿ ನೀಡಿ ಕೊಲೆ ಮಾಡಿಸಲಾಗಿತ್ತು. ಈ ಹಿನ್ನಲೆ ಬನ್ನಂಜೆಯ ರಾಜಾ, ಉ.ಪ್ರ ಮೂಲದ ಜಗದೀಶ್ ಪಟೇಲ್, ಬೆಂಗಳೂರಿನ ಅಭಿ ಬಂಡಗಾರ್, ಉಡುಪಿಯ ಗಣೇಶ್ ಭಜಂತ್ರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ.
ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ; ನಾಲ್ವರಿಗೆ ಜೀವಾವಧಿ ಶಿಕ್ಷೆ ಪ್ರಕಟ
Subscribe
Login
0 Comments