ಬೆಂಗಳೂರು: ಸರ್ಕಾರವು ಆಜಾನ್ ವಿಚಾರದಲ್ಲಿ ಹೊಸ ಕಾನೂನನ್ನು ತಂದಿಲ್ಲ. ಈ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿ ಮಾಡುವುದು ಬೇಡ. ಸರ್ಕಾರಕ್ಕೆ ಎಲ್ಲಾ ಜಾತಿ-ಧರ್ಮದವರು ಒಂದೇ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘಟನೆಗಳು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಶಾಂತಿ-ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದೇವಸ್ಥಾನ, ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ಆದೇಶವಿದೆ. ಹೈಕೋರ್ಟ್ ಎಷ್ಟು ಡೆಸಿಮಲ್ ವರೆಗೆ ಬಳಸಬೇಕೆಂದು ಆದೇಶಿಸಿದೆ. ಅದನ್ನು ಹಂತಹಂತವಾಗಿ ಜಾರಿಗೆ ತರುವ ಕಾರ್ಯವಾಗುತ್ತಿದೆ ಎಂದರು.
ಆಜಾನ್ ವಿಚಾರವಾಗಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ: ಸಿಎಂ ಬೊಮ್ಮಾಯಿ
Subscribe
Login
0 Comments