ಶಿರ್ವ: ಪ.ಜಾ.ಗೆ ಸೇರಿದ ವ್ಯಕ್ತಿಯ ಮನೆ ತೆರವು ಮಾಡಿದ್ದನ್ನು ಖಂಡಿಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಶಿರ್ವ ಗ್ರಾ.ಪಂ. ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ವೇಳೆ ಗ್ರಾ.ಪಂ. ಪಿಡಿಓ ಜೊತೆ ಮಾತಿನ ಚಕಮಕಿ ನಡೆದಿದ್ದು, ತಳ್ಳಾಟ, ನೂಕಾಟ ನಡೆದಿದೆ. ತಳ್ಳಾಟದಲ್ಲಿ ವಿನಯ್ ಕುಮಾರ್ ಸೊರಕೆ ಅವರ ಶರ್ಟ್ ಹರಿದು ಹೋಗಿದೆ. ಈ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಬಂದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.