ಕುಂದಾಪುರ: ಇಚರ್ ವಾಹನ ಹಾಗೂ ದ್ವಿಚಕ್ರ ವಾಹನ ಮಧ್ಯೆ ಅಪಘಾತವಾಗಿ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆ ಕೋಟದ ಮಣೂರಿನಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ. ಮಂಗಳೂರಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಇಚರ್ ವಾಹನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕೆಟ್ಟು ನಿಂತಿತ್ತು. ಅದೇ ದಾರಿಯಾಗಿ ಕೋಟದಿಂದ ಕುಂಭಾಶಿ ಕಡೆಗೆ ಚಲಿಸುತ್ತದ್ದ ಮೂವರು ಬೈಕ್ ಸವಾರರು ಮುಂದೆ ತೆರಳುತ್ತಿದ್ದ ಬಸ್ಸ್ ನಡುವೆ ಕೆಟ್ಟುನಿಂತ ಇಚರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪ್ರಸನ್ನ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಉಳಿದ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು, ಇಚರ್ ವಾಹನ ಚಾಲಕನಿಗೂ ಕೂಡ ಗಾಯಗಳಾಗಿವೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.