Sunday, June 8, 2025

ಪ್ರೇಮ ವೈಫಲ್ಯದಿಂದ ಮೊಬೈಲ್ ಟವರ್ ಏರಿದ ಭೂಪ..!

ಮಂಗಳೂರು: ಪ್ರೇಮ ವೈಫಲ್ಯ ಹಿನ್ನೆಲೆ ಯುವಕನೋರ್ವ ಮೊಬೈಲ್ ಟವರ್ ಏರಿದ ಘಟನೆ ಮಂಗಳೂರು ಹೊರವಲಯದ ಅಡ್ಯಾರು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಯುವಕನ್ನು ಬಂಟ್ವಾಳದ ಕೊಡಮನ್ ಕಂಜಾರದ ನಿವಾಸಿ ಸುಧೀರ್ ಎಂದು ಗುರುತಿಸಲಾಗಿದ್ದು, ಈತ ತನ್ನದೇ ಊರಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಅವರಿಬ್ಬರ ನಡುವೆ ಮನಃಸ್ತಾಪ ಉಂಟಾಗಿದ್ದು, ಪ್ರೇಯಸಿ ಕೈ ಕೊಟ್ಟಳು ಎಂದು ಆರೋಪಿಸಿ ಮೊಬೈಲ್ ಟವರ್ ಏರಿದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಯುವಕನನ್ನು ಕೆಳಗಿಳಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದು, ಯುವಕ ಕೆಳಗೆ ಇಳಿಯಲೇ ಇಲ್ಲ. ಕೊನೆಗೆ ಪ್ರೀತಿಸಿದ ಹುಡುಗಿಯೇ ಬಂದು ಕರೆದ ಬಳಿಕ ಯುವಕ ಟವರ್‌ನಿಂದ ಕೆಳಗಿಳಿದಿದ್ದಾನೆ. ನಂತರ ಹೊಯ್ಸಳ ತಂಡವು ಈತನನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles