ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರಿಕ್ಷಾ ಕೊಠಡಿಗೆ ಬರಬೇಕು. ಸಮವಸ್ತ್ರ ಇರುವ ಕಡೆ ವಿದ್ಯಾರ್ಥಿಗಳು ಪಾಲಿಸೋದು ಕಡ್ಡಾಯ. ಸಮವಸ್ತ್ರ ಇಲ್ಲದ ಕಡೆ ಧರ್ಮಸೂಚಕ ವಸ್ತ್ರಕ್ಕೆ ಅನುಮತಿ ಇಲ್ಲ. ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರ ಧರಿಸುವಂತಿಲ್ಲ ಎಂದು ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯು ಎಸ್ಎಸ್ಎಲ್ಸಿ ಮಾದರಿಯಲ್ಲೇ ಈ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ಶಿಕ್ಷಕರಿಗೆ ಸಮವಸ್ತ್ರ ಕಡ್ಡಾಯವಿಲ್ಲ. ಪರೀಕ್ಷೆಗೆ ಗೈರಾದವರಿಗೆ ಪ್ರತಿ ವರ್ಷದಂತೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.