ಸುಳ್ಯ: ಯುವಕನೋರ್ವ ಲಾರಿಯಡಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಗಾಂಧಿನಗರದ ಮುಖ್ಯರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಗಾಯಗೊಂಡ ಯುವಕ ಉತ್ತರ ಕನ್ನಡ ಮೂಲದ ಮಂಜುನಾಥ ಎಂದು ಗುರುತಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರಲ್ಲಿ ಯುವಕನು ರಸ್ತೆ ದಾಟುತ್ತಿದ್ದ ವೇಳೆ ಏಕಾಏಕಿ ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿಯಡಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಯುವಕನ ತಲೆ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಯುವಕನನ್ನು ಸ್ಥಳೀಯರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.