ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದ ಹಿನ್ನೆಲೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ್ದಕ್ಕೆ ಉಡುಪಿಯ ಆರು ಮಂದಿ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಮನೆಗೆ ವಾಪಾಸ್ಸಾದ ಘಟನೆ ಉಡುಪಿಯ ವಿದ್ಯೋದಯ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಆಲಿಯಾ ಅಸ್ಸಾದಿ ಮತ್ತು ರೇಷಂ ಪರೀಕ್ಷೆ ಬರೆಯದೆ ಮನೆಗೆ ವಾಪಾಸ್ಸಾದ ವಿದ್ಯಾರ್ಥಿನಿಯರು. ಇವರು ಪರೀಕ್ಷೆ ಆರಂಭಕ್ಕೂ ಮುನ್ನ ಪ್ರವೇಶ ಪತ್ರ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಹಿಜಾಬ್ ಧರಿಸಿ ಪರೀಕ್ಷೆ ಬರೆಯುವುದಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದ್ದಾರೆ. ಆದರೆ ಕಾಲೇಜಿನ ಸಿಬ್ಬಂದಿ ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದರೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆ ಆಲಿಯಾ ಅಸ್ಸಾದಿ ಮತ್ತು ರೇಷಂ ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ಸಾಗಿದ್ದಾರೆ.