ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಲೆಕುಡಿಯರನ್ನ ಕೆಲಸದಿಂದ ವಜಾಗೊಳಿಸಿದ ಆರೋಪಕ್ಕೆ ಸಂಬAಧಿಸಿದAತೆ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಹಿಂದೂ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನದ ಪಂಚ ಪರ್ವ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 27 ಮಲೆಕುಡಿಯರಿಗೆ ವೇತನ ನೀಡದೆ ಏಕಾಏಕಿ ಕೆಲಸದಿಂದ ವಜಾಗೊಳಿಸಿದೆ. ಎರಡುವರೆ ವರ್ಷದಿಂದ ಮಲೆಕುಡಿಯರು ಇಲ್ಲಿ ರಥ ಕಟ್ಟುವುದು,ಪರ್ವ ಸೇವೆ ಕೆಲಸ ಮಾಡುತ್ತಿದ್ದರು. ಆದರೆ ಏಕಾಏಕಿ ಅವರನ್ನು ಕೆಲಸದಿಂದ ವಜಾಗೊಳಿಸಿರುವುದಕ್ಕೆ ದೇವಸ್ಥಾನದ ಕಾರ್ಯ ನಿರ್ವಹಣಾ ಅಧಿಕಾರಿ ವಿರುದ್ಧ ಹಿಂದೂ ಸಂಘಟನೆ ಕಿಡಿಕಾರಿದ್ದಾರೆ.