ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ 4ನೇ ಅಲೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ನಡುವೆ ಸೋಂಕಿತರ ಸಂಖ್ಯೆಯೂ ಕೂಡ ಹೆಚ್ಚುತ್ತಿರುವುದು ಜನರಿಗೆ ಚಿಂತೆಯನ್ನುAಟು ಮಾಡಿದೆ. ಸರ್ಕಾರ, ಆರೋಗ್ಯ ಇಲಾಖೆ ಮುನ್ನಚ್ಚರಿಕಾ ಕ್ರಮವನ್ನು ವಹಿಸುವಂತೆ ಜನರಿಗೆ ಎಚ್ಚರಿಕೆಯನ್ನು ನೀಡುತ್ತಲೇ ಇದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,545 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.
ಇನ್ನು, ಕಳೆದ 24ಗಂಟೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 27 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ಗೆ ಸಾವನ್ನಪ್ಪಿದವರ ಸಂಖ್ಯೆ 5,24,೦೦2ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 19,688 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,549 ಜನರು ಕೋವಿಡ್ ಸೋಂಕಿನಿAದ ಗುಣಮುಖರಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 4,25,51,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಹೆಚ್ಚಿದ ಕೊರೊನಾ 4ನೇ ಅಲೆ ಆತಂಕ: ಒಂದೇ ದಿನ 3,545 ಜನರಲ್ಲಿ ಸೋಂಕು ಪತ್ತೆ
Subscribe
Login
0 Comments