ಮಂಗಳೂರು: ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ನಮಗೆ ಮುಖ್ಯ. ಪೊಲೀಸ್ ಆಯುಕ್ತರ ಕಚೇರಿಗೆ ಯಾರು ಹೋಗುತ್ತಾರೆ, ಯಾರು ಬರುತ್ತಾರೆ ಎಂಬುದು ಬೇಡ. ಎಲ್ಲೋ ಕುಳಿತು ಇಲ್ಲ ಸಲ್ಲದ ಸುಳ್ಳು ಆರೋಪ ಹಾಕುವುದಲ್ಲ. ಪೊಲೀಸ್ ಆಯುಕ್ತರ ಕಚೇರಿಗೆ ಯಾರು ಬೇಕಾದರೂ ಹೋಗಿ ಮಾತನಾಡಬಹುದು ಎಂದು ವಿಪಕ್ಷ ನಾಯಕ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಪೊಲೀಸ್ ಆಯುಕ್ತರ ವಿರುದ್ಧ ಬರೆದವರ ವಿರುದ್ಧ ಗರಂ ಆಗಿದ್ದಾರೆ. ಅಧಿಕಾರಿಗಳ ಮೇಲೆ ಅಪನಂಬಿಕೆ ಮೂಡಿಸುದು ಸರಿಯಲ್ಲ. ಅಧಿಕಾರಿಗಳ ಬಗ್ಗೆ ಬರೆದು ಹಾಕುವವರು ಎಲ್ಲೋ ಕುಳಿತು ಬರಿತಾರೆ. ಅಂತಹವರು ನೇರವಾಗಿ ಕಚೇರಿಗೆ ಹೋಗಿ ಮಾತುಕತೆ ನಡೆಸಲಿ ಎಂದು ಹೇಳಿದ್ದಾರೆ.
ನಂತರ ಸಾಮಾಜಿಕ ಜಾಲತಾಣದ ಮೂಲಕ ಸಮಾಜದಲ್ಲಿ ಗೊಂದಲ, ವೈಮನಸ್ಸು ಸೃಷ್ಟಿ ವಿಚಾರದ ಕುರಿತು ಮಾತನಾಡಿ, ಈ ರೀತಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ. ಜಿಲ್ಲಾಡಳಿತ ಪೊಲೀಸ್ ಇಲಾಖೆ ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳಲಿ. ಜಿಲ್ಲೆಯಲ್ಲಿ ಮುಸ್ಲಿಂ ಡಿಫೆನ್ಸ್ ಪೋರ್ಸ್ನಿಂದ ಶಾಂತಿ ಕದಡುವ ಕೃತ್ಯ ನಡೆಯುತ್ತಿದೆ. ಈ ರೀತಿಯ ಕೃತ್ಯ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಿ. ಇದರ ಹಿಂದೆ ಯಾರು ಇದ್ದಾರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ. ಯಾವುದೇ ಎಡ್ರಸ್ ಇಲ್ಲದೆ ಯಾವುದೇ ವಿಚಾರ ಇಲ್ಲದೆ ಈ ಕೃತ್ಯ ಮಾಡುತ್ತಾ ಇದ್ದಾರೆ. ಯಾರ ಯಾರ ಹೆಸರಿನಲ್ಲಿ ಈ ರೀತಿಯ ಕೃತ್ಯ ಮಾಡಲಾಗಿದೆ. ಈ ಕೃತ್ಯಗಳಿಗೆ ಸರ್ಕಾರ ಕಡಿವಾಣ ಹಾಕಬೇಕಿದೆ. ಈ ಬಗ್ಗೆ ಸರ್ಕಾರ ಜಾಗೃತಿ ಆಗಬೇಕಿದೆ. ಜಿಲ್ಲೆಯ ಉಸ್ತುವಾರಿ ಸಚಿವರು ಎಲ್ಲಿದ್ದಾರೆ ಏನು ಮಾಡುತ್ತಾ ಇದ್ದಾರೆ. ನಾವು ಉಸ್ತುವಾರಿ ಆಗಿದ್ದಾಗ ಇದರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು ಎಂದಿದ್ದಾರೆ.
ಇನ್ನು, ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಬಿಜೆಪಿ ಸೇರುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಗೆ ಮುಂದೆ ಗೆಲ್ಲುವುದಿಲ್ಲ ಎಂದು ಗೊತ್ತಾಗಿದೆ. ಅದಕ್ಕೆ ಕಾಂಗ್ರೆಸ್ನಿAದ ಅಭ್ಯರ್ಥಿಗಳನ್ನು ಕರೆಯುತ್ತಿದ್ದಾರೆ ಎಂದರು.