ಉಡುಪಿ:ರಾಜ್ಯದಲ್ಲೇ ಪ್ರಥಮ ಬಾರಿಗೆ ಉಡುಪಿಯ ಮಲ್ಪೆ ಬೀಚ್ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯು ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ. ಪ್ರವಾಸಿಗರ ಆಕರ್ಷಣೆಗೆಂದು ಸುಮಾರು 80ಲಕ್ಷ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸಲಾಗಿದೆ.
ಇದೀಗ ಸೇತುವೆ ಉದ್ಘಾಟನೆಯಾದ ಮೂರೇ ದಿನಕ್ಕೆ ಅಲೆಗಳ ಭೀಕರ ಹೊಡೆತಕ್ಕೆ ಸಿಲುಕಿ, ತೀವ್ರವಾಗಿ ಹಾನಿಯಾಗಿದ್ದು, ಸೇತುವೆಯ ಬಿಡಿಭಾಗಗಳು ಸಮುದ್ರ ಪಾಲಾಗಿದೆ. ನಿನ್ನೆ ಬೆಳಿಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದು, ನಿನ್ನೆ ಸಂಜೆಯಿಂದಲೇ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇನ್ನು ತೇಲುವ ಸೇತುವೆ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರೂ ಅಲೆಗಳ ಅಬ್ಬರ ಹೆಚ್ಚಿದ್ದ ಕಾರಣ ಜನರ ಸುರಕ್ಷತೆ ದೃಷ್ಟಿಯಿಂದ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.