Sunday, June 8, 2025

9 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ

ಉಡುಪಿ: 9 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಪಕ್ಕಾಲುವಿನಲ್ಲಿ ನಡೆದಿದೆ. ಮೃತರನ್ನು ಪೆರ್ಡೂರು ಗ್ರಾಮದ ಪಕ್ಕಾಲು ಜಯಲಕ್ಷ್ಮೀ ಮನೆ ನಿವಾಸಿ ನಾಗರಾಜ ಆಚಾರ್ಯ(30) ಎಂದು ಗುರುತಿಸಲಾಗಿದೆ.
ಮನೆ ಸಮೀಪದ ಚೌಂಡಿ ನಗರದ ಕೇಶವ ಹೆಗ್ಡೆ ಅವರ ಹಾಡಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ನಾಗರಾಜ ಆಚಾರ್ಯ ಎಂಬುವವರು 2021ರ ಆಗಸ್ಟ್ 11ರ ಬೆಳಿಗ್ಗೆ 8.30ರಿಂದ ಮನೆಯಿಂದ ಕಾಣೆಯಾಗಿದ್ದರು. ಮನೆಯವರು ಸಾಕಷ್ಟು ಹುಡುಕಾಡಿದರೂ ನಾಗರಾಜ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ನಿನ್ನೆ ಸಂಜೆ ಮೃತನ ಸಹೋದರನಿಗೆ ಅಸ್ಥಿಪಂಜರ ಬಗ್ಗೆ ಸ್ನೇಹಿತ ಮಾಹಿತಿ ನೀಡಿದ್ದು, ಹಾಡಿಯಲ್ಲಿ ತಲೆ ಬುರುಡೆ, ಎಲುಬುಗಳು, ಕಪ್ಪು ಬಣ್ಣದ ಪ್ಯಾಂಟ್ ಮತ್ತು ೨ ಖಾಲಿ ಪ್ಲಾಸ್ಟಿಕ್ ಬಾಟಲಿ ಪತ್ತೆಯಾಗಿತ್ತು.
ಇನ್ನು, ಕಾಣೆಯಾಗಿದ್ದ ನಾಗರಾಜ ಧರಿಸಿದ ಬಟ್ಟೆ ಹಾಗೂ ಚಪ್ಪಲಿ ಮೂಲಕ ಮೃತದೇಹವನ್ನು ಸಹೋದರ ಪತ್ತೆ ಹಚ್ಚಿದ್ದು, ಅಣ್ಣ ಸಾವಿನ ಬಗ್ಗೆ ಸಹೋದರ ಯುವರಾಜ್ ಆಚಾರ್ಯ ಸಂಶಯ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles