Monday, June 9, 2025

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಮನವಿ

ಕುಂದಾಪುರ: ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣ ಶೇಕಡ 3 ರಿಂದ 7.5ಕ್ಕೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಏನಿದೆ…?
1958ರ ನಂತರ 1961ರಲ್ಲಿ ನಡೆದ ಜನಗಣತಿಯಲ್ಲಿ ಪರಿಶಿಷ್ಟ ಪಂಗಡದವರ ಜನಸಂಖ್ಯೆ 1,92,096 ರಷ್ಟಿದ್ದು ಇದು ಒಟ್ಟಾರೆ ಜನಸಂಖ್ಯೆಯಲ್ಲಿ ಶೇಕಡ 0.81 ರಷ್ಟಿರುತ್ತದೆ. ಪರಿಶಿಷ್ಟ ಪಂಗಡದವರ ಜನಸಂಖ್ಯೆ ಮುಂದಿನ ೫ಜನಗಣತಿಯಲ್ಲಿ ಭಾರಿಪ್ರಮಾಣದಲ್ಲಿ ಹೆಚ್ಚಾಗಿ 2011 ರಲ್ಲಿ ಅದು 42,48,987 ಆಗಿರುತ್ತದೆ. ಅಂದರೆ ಪರಿಶಿಷ್ಟ ಪಂಗಡದವರ ಜನಸಂಖ್ಯೆ 1961 ರ ಜನಗಣತಿಗೆ ಹೋಲಿಸಿದಲ್ಲಿ 22.11 ರಷ್ಟು ಹೆಚ್ಚಾಗಿರುತ್ತದೆ. ಆದರೆ 1958ರಲ್ಲಿ 1,92,096 ರಷ್ಟಿದ್ದ ಜನಸಂಖ್ಯೆಗೆ ನಿಗದಿಯಾಗಿದ ಮೀಸಲಾತಿ ಶೇಕಡ 3ರ ಪ್ರಮಾಣ ಇಂದು ಪರಿಶಿಷ್ಟ ಪಂಗಡದ ಜನಸಂಖ್ಯೆ 42,48,987 ರಷ್ಟು ಹೆಚ್ಚಿದ್ದರೂ ಕೂಡ ಮೀಸಲಾತಿಯ ಪ್ರಮಾಣ ಶೇಕಡ 3 ರಷ್ಟೇ ಇದೆ. ಇದರಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿಗಳಿಗೆ ಅವರ ಪ್ರಾತಿನಿಧ್ಯತೆ ಸಂಬAದ ಅನೇಕ ವರ್ಷಗಳಿಂದ ದೊಡ್ಡ ಅನ್ಯಾಯವಾಗುತ್ತಿದೆ. ಈ ಹಿನ್ನೆಲೆ ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ಸೇವೆಗಳಲ್ಲಿ ಮೀಸಲಾತಿ ಪ್ರಮಾಣವನ್ನೇ ಜನಸಂಖ್ಯೆಗನುಗುಣವಾಗಿ ಶೇಕಡ 7.5ಕ್ಕೆ ಹೆಚ್ಚಿಸಬೇಕೆಂದು ಮನವಿ ಮಾಡಲಾಗಿದೆ.
ಈ ವೇಳೆ ಕುಂದಾಪುರ ತಾಲೂಕಿನ ಕೊರಗ ಸಂಘಟನೆ, ಮರಾಟಿ ನಾಯ್ಕ ಸಂಘಟನೆ ಹಾಗೂ ಮಲೆಕುಡಿಯ ಸಂಘಟನೆಯ ಮುಖಂಡರು ಇದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles