Thursday, June 19, 2025

ಸಹೋದರರ ನಡುವೆ ಗಲಾಟೆ: ಅಣ್ಣನಿಂದ ತಮ್ಮನ ಬರ್ಬರ ಹತ್ಯೆ

ವಿಟ್ಲ: ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ವಿಟ್ಲದ ಶಿರಂಕಲ್ಲು ನಂದೆರೆಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಾಲಪ್ಪ ನಾಯ್ಕ್ ಹಾಗೂ ಆರೋಪಿಯನ್ನು ಐತಪ್ಪ ನಾಯ್ಕ್ ಎನ್ನಲಾಗಿದೆ.

ಬಾಲಪ್ಪ ನಾಯ್ಕ್ ಮತ್ತು ಐತಪ್ಪ ನಾಯ್ಕ್ ಇಬ್ಬರು ಸಹೋದರರಾಗಿದ್ದು, ಕೆಲ ದಿನಗಳಿಂದ ಇವರಿಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇಂದು ಹೊಸ ಮನೆಯಲ್ಲಿ ಗೊಂದೋಳು ಪೂಜೆ ನಡೆಯುತ್ತಿದ್ದು, ಈ ವೇಳೆ ಸಹೋದರರಿಬ್ಬರೂ ಹಳೆ ಮನೆಯಲ್ಲಿ ಜಗಳವಾಡಿದ್ದು, ಜಗಳ ತಾರಕ್ಕಕ್ಕೇರಿ ಅಣ್ಣ ತಮ್ಮನ್ನನ್ನೇ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles